ದಿನಕ್ಕೊಂದು ಕವಿ ಪರಿಚಯ | ಗಿರೀಶ್ ಕಾರ್ನಾಡ್ | ಕನ್ನಡಕ್ಕೆ 7 ನೇ ಜ್ಞಾನ ಪೀಠ ಪ್ರಶಸ್ತಿ ದೊರಕಿಸಿಕೊಟ್ಟವರು

 

 ದಿನಕ್ಕೊಂದು ಕವಿ ಪರಿಚಯ

ಗಿರೀಶ್ ಕಾರ್ನಾಡ್


ಜನನ     -     5/9/1938


ಮರಣ   -    10 June 2019


ವೃತ್ತಿ       -     ನಾಟಕಕಾರ, ನಟ, ನಿರ್ದೇಶಕ


ತಂದೆ.     -    ಡಾ॥ ರಘುನಾಥ್ ಕಾರ್ನಾಡ್


ತಾಯಿ.   -    ಕೃಷ್ಣಾ ಬಾಯಿ


  •        ಗಿರೀಶ ಕಾರ್ನಾಡರು ಆಕ್ಸ್‌ಫರ್ಡ್‌ ಡಿಬೇಟ ಕ್ಲಬ್ ಗೆ                   ಅಧ್ಯಕ್ಷರಾಗಿ ಆಯ್ಕೆಯಾದ ಪ್ರಥಮ ಏಷಿಯನ್ ಆಗಿದ್ದಾರೆ.


ಜೀವನ


  • ಗಿರೀಶರ ಪ್ರಾಥಮಿಕ ಶಿಕ್ಷಣ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ, ಪ್ರೌಢಶಿಕ್ಷಣ ಧಾರವಾಡದ ಬಾಸೆಲ್ ಮಿಷನ್ ಹೈಸ್ಕೂಲಿನಲ್ಲಿ ಹಾಗೂ ಪದವಿ ಶಿಕ್ಷಣ ಕರ್ನಾಟಕ ಕಾಲೇಜಿನಲ್ಲಿ ಆಯಿತು
  • ಬಳಿಕ ರ್ಹೊಡ್ಸ್ ಸ್ಕಾಲರ್ಶಿಪ್ ಪಡೆದುಕೊಂಡು ಆಕ್ಸ್‌ಫರ್ಡ್‌ನಲ್ಲಿ ಹೆಚ್ಚಿನ ವ್ಯಾಸಂಗಕ್ಕೆ ತೆರಳಿದರು
  • ಬಹುಭಾಷಾ ಪಂಡಿತರೆಂಬ ಹಿರಿಮೆಗೆ ಪಾತ್ರರಾಗಿ, ಷಿಕಾಗೋ ವಿಶ್ವವಿದ್ಯಾಲಯದಲ್ಲಿ ಸಂದರ್ಶಕ ಪ್ರಾಧ್ಯಾಪಕರಾಗಿ ಕಾರ್ನಾಡ್ ಸೇವೆ ಸಲ್ಲಿಸಿದರು.
  • ವಿದೇಶದಲ್ಲಿದ್ದಾಗಲೇ ಕನ್ನಡ ನಾಟಕಗಳನ್ನು ಬರೆದು ಇಲ್ಲಿಗೆ ಬಂದು ಹೊಸ ನಾಟಕಗಳ ಓದು, ಪ್ರದರ್ಶನಕ್ಕೆ ದಾರಿ ಮಾಡಿಕೊಂಡರು. ಇವರು ಕನ್ನಡವಲ್ಲದೆ ಹಿಂದಿಪಂಜಾಬಿಮರಾಠಿ ಹಾಗೂ ಭಾರತೀಯ ಹಲವು ಭಾಷೆಗಳಿಗೆ ತಮ್ಮ ನಾಟಕಗಳು ಅನುವಾದಗೊಂಡು, ಪ್ರದರ್ಶನಗೊಂಡವು
  • ಆಕ್ಸ್‌ಫರ್ಡ್‌ನಿಂದ ಬಂದ ನಂತರ ಮದ್ರಾಸ್‌ನಲ್ಲಿ ಆಕ್ಸ್ ಫ಼ರ್ಡ್ ಯೂನಿವರ್ಸಿಟಿ ಪ್ರೆಸ್ ನಲ್ಲಿ ಸಂಪಾದಕರಾಗಿ ನೌಕರಿಯಲ್ಲಿದ್ದು, ಅದನ್ನು ತೊರೆದು ಧಾರವಾಡಕ್ಕೆ ವಾಪಾಸಾಗಿ ನಾಟಕ ಕ್ಷೇತ್ರದಲ್ಲಿ ಕೃಷಿ ನಡೆಸಿದರು.


ನಾಟಕಗಳು


  1. ಮಾ ನಿಷಾಧ - ಏಕಾಂಕ ನಾಟಕ
  2. ಯಯಾತಿ - ೧೯೬೧
  3. ತುಘಲಕ್ - ೧೯೬೪
  4. ಹಯವದನ - ೧೯೭೨(ನಾಟ್ಯರಂಗ ಪ್ರಶಸ್ತಿ )
  5. ಅಂಜುಮಲ್ಲಿಗೆ - ೧೯೭೭
  6. ಹಿಟ್ಟಿನ ಹುಂಜ ಅಥವಾ ಬಲಿ - ೧೯೮೦
  7. ನಾಗಮಂಡಲ - ೧೯೯೦
  8. ತಲೆದಂಡ - ೧೯೯3
  9. ಅಗ್ನಿ ಮತ್ತು ಮಳೆ - ೧೯೯೫
  10. ಟಿಪ್ಪುವಿನ ಕನಸುಗಳು - ೧೯೯೭
  11. ಒಡಕಲು ಬಿಂಬ - ೨೦೦೫
  12. ಮದುವೆ ಅಲ್ಬಮ್
  13. ಫ್ಲಾವರ್ಸ - ೨೦೧೨
  14. ಬೆಂದ ಕಾಳು ಆನ್ ಟೋಸ್ಟ- ೨೦೧೨


ಆತ್ಮ ಚರಿತ್ರೆ


  1. ಆಡಾಡತ ಆಯುಷ್ಯ (೨೦೧೧)


ಪ್ರಶಸ್ತಿ, ಸನ್ಮಾನಗಳು


  1. ಸಿನಿಮಾ ಸೇವೆ ಪರಿಗಣಿಸಿ ಗೌರವ ಡಾಕ್ಟರೇಟ್
  2. ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ,
  3. ಗುಬ್ಬಿ ವೀರಣ್ಣ ಪ್ರಶಸ್ತಿ,
  4. ಕೇಂದ್ರ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ,
  5. ಪದ್ಮಶ್ರೀ -೧೯೭೪
  6. ಪದ್ಮಭೂಷಣ -೧೯೯೨
  7. ಜ್ಞಾನಪೀಠ -೧೯೯೮
  8. ಕಾಳಿದಾಸ ಸಮ್ಮಾನ್ - ೧೯೯೮
  9. ಕಾರ್ನಾಡ್ ಕೇಂದ್ರ ಸಂಗೀತ-ನಾಟಕ ಅಕಾಡೆಮಿಯ ಅಧ್ಯಕ್ಷರಾಗಿ ೧೯೮೮-೯೩ ಕಾರ್ಯನಿರ್ವಹಿಸಿದ್ದಾರೆ.
  10. ಇಂಗ್ಲೆಂಡ್‌ನಲ್ಲಿ ನೆಹರು ಸೆಂಟರ್‌ನ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದಾರೆ.
  11. ಟಾಟಾ ಲಿಟರೇಚರ್ ಲೈವ ಜೀವಮಾನ ಸಾಧನೆ (ಚಿತ್ರೋದ್ಯಮ)-2017
  12. ಡಾ.ಟಿ.ಎಂ.ಎ.ಪೈ ವಿಶಿಷ್ಟ ಕೊಂಕಣಿ ಸಾಧಕ ಪ್ರಶಸ್ತಿ (1996)


Comments

Popular posts from this blog

ದಿನಕ್ಕೊಂದು ಕವಿ ಪರಿಚಯ | ಪಾಟೀಲ ಪುಟ್ಟಪ್ಪ | ಪಾಪು | ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾಗುವಂತಹ ಪ್ರಮುಖ ನೋಟ್ಸ್

ದಿನಕ್ಕೊಂದು ಕವಿ ಪರಿಚಯ | ಶಿವರಾಮ ಕಾರಂತ | ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾಗುವಂತಹ ನೋಟ್ಸ್